
ಚಾಮರಾಜನಗರದ ಹನೂರು ಬಳಿ ಅರಣ್ಯ ಇಲಾಖೆ ಸಿಬ್ಬಂದಿಯ ಗುಂಡೇಟಿಗೆ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತರಲ್ಲೊಬ್ಬರಾದ ಕುಮಾರ್ ಅವರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ ನೀಡಿದೆ.
ಲಾಸರ್ ದೊಡ್ಡಿ ಗ್ರಾಮದಲ್ಲಿರುವ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ ನಿಯೋಗ, ಘಟನೆಯ ಕುರಿತು ಮಾಹಿತಿ ಪಡೆದುಕೊಂಡಿದೆ.
ಮೃತರ ಬಳಿ ನಾಡುಬಂದೂಕು ಅಥವಾ ಮಾಂಸ ಇರಲಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದು, ಹಸು ಕಾಣೆಯಾದ ಹಿನ್ನೆಲೆಯಲ್ಲಿ ಹುಡುಕಲು ಹೋಗಿದ್ದಾಗ ಈ ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ.