
ಪ್ರಧಾನಿ ಮೋದಿ ಅವರು ರಾಜಕೀಯ ಜೀವನಕ್ಕೆ ಕಾಲಿಟ್ಟು 25 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 17ರವರೆಗೆ 'ಸೇವಾ ಸಂಕಲ್ಪ' ಅಭಿಯಾನವನ್ನು ಹಮ್ಮಿಕೊಳ್ಳಲು ಎನ್ಡಿಎ ಮೈತ್ರಿಕೂಟ ನಿರ್ಧರಿಸಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೆಹಲಿಯಲ್ಲಿ ಸುದ್ದಿಗೋಷೋಧಿ ನಡೆಸಿ, ಈ ಅಭಿಯಾನವು ಪ್ರತಿ ಜಿಲ್ಲೆ, ಲೋಕಸಭಾ, ವಿಧಾನಸಭಾ ಕ್ಷೇತ್ರ ಹಾಗೂ ಬೂತ್ ಮಟ್ಟದಲ್ಲಿ ನಡೆಯಲಿದ್ದು 12 ವಿವಿಧ ಕಾರ್ಯಕ್ರಮಗಳನ್ನು ಒಳಗೊಂಡಿರಲಿದೆ ಎಂದು ತಿಳಿಸಿದ್ದಾರೆ.
ಕಳೆದ 25 ವರ್ಷಗಳಲ್ಲಿ ದೇಶವು ಜಿಡಿಪಿಯಲ್ಲಿ ಉನ್ನತ ಸ್ಥಾನ ತಲುಪಿದೆ ಹಾಗೂ ಸುಮಾರು 250 ಮಿಲಿಯನ್ ಜನರನ್ನು ಬಡತನದಿಂದ ಹೊರತರಲಾಗಿದೆ ಎಂದು ಅವರು ವಿವರಿಸಿದ್ದಾರೆ.