
ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಕುಟುಂಬಸ್ಥರ ನಿವಾಸಗಳ ಮೇಲೆ ಇಡಿ ಅಧಿಕಾರಿಗಳು ಬೆಂಗಳೂರು, ಬೆಳಗಾವಿ ಸೇರಿದಂತೆ 21 ಕಡೆ ದಿಢೀರ್ ದಾಳಿ ನಡೆಸಿದ್ದಾರೆ.
ದಾಳಿಯ ವೇಳೆ ಲೆಕ್ಕಕ್ಕೆ ತೋರಿಸದ 3.3 ಕೋಟಿ ರೂಪಾಯಿ ನಗದು ಹಾಗೂ 15 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿ ಜಪ್ತಿ ಮಾಡಲಾಗಿದ್ದು, ಪಿಡಬ್ಲ್ಯೂಡಿ ಇಲಾಖೆಯಲ್ಲಿ ಅಕ್ರಮ ಹಾಗೂ ಲಂಚ ಸಂಗ್ರಹದ ದಾಖಲೆಗಳು ಪತ್ತೆಯಾಗಿವೆ.
ಕಾಂಗೋದ ಗಣಿಗಾರಿಕೆ ಸಂಸ್ಥೆಯಲ್ಲಿ ಶೇ. 40ರಷ್ಟು ಪಾಲು ಹಾಗೂ ವಿದೇಶಿ ಸಂಸ್ಥೆಗಳಿಗೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿದ್ದು, ಈ ಬೆಳವಣಿಗೆಯು ವಿಪಕ್ಷಗಳಿಗೆ ಅಸ್ತ್ರವಾದಂತಾಗಿದೆ.