
ನಾಡಗೀತೆಯ ರಾಗ ಮತ್ತು ಎರಡೂವರೆ ನಿಮಿಷದ ಕಾಲಮಿತಿಯನ್ನು ನಿಗದಿಪಡಿಸಿ ಕರ್ನಾಟಕ ಸರ್ಕಾರ ಹೊರಡಿಸಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.
ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಮತ್ತು ನ್ಯಾಯಮೂರ್ತಿ ಆರ್. ಮಹದೇವನ್ ಅವರಿದ್ದ ಪೀಠ ವಜಾಗೊಳಿಸಿದೆ.
ನಾಡಗೀತೆಯ ಪ್ರಸ್ತುತಿಯಲ್ಲಿ ಏಕರೂಪತೆ ಇರುವುದು ಅತ್ಯಗತ್ಯ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯ, 2022ರ ಸೆಪ್ಟೆಂಬರ್ 25ರ ಸರ್ಕಾರದ ಆದೇಶದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದೆ.