
ವಾಲ್ಮೀಕಿ ನಿಗಮ ಹಗರಣ ಮತ್ತು ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆಪ್ಟೆಂಬರ್ 1ರಿಂದ 10ರವರೆಗೆ ಬಿಜೆಪಿ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದೆ.
ರಾಯಚೂರಿನ ಗುರುಗುಂಟದಿಂದ ಬಳ್ಳಾರಿವರೆಗೆ ಸುಮಾರು 190 ರಿಂದ 200 ಕಿ.ಮೀ. ಉದ್ದದ ಈ ಪಾದಯಾತ್ರೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಲನೆ ನೀಡಲಿದ್ದಾರೆ.
ಈ ಪಾದಯಾತ್ರೆಯು 8 ರಿಂದ 9 ವಿಧಾನಸಭಾ ಕ್ಷೇತ್ರಗಳ ಮೂಲಕ ಸಾಗಲಿದ್ದು, ಸಮಾರೋಪ ಸಮಾರಂಭದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಭಾಗವಹಿಸಲಿದ್ದಾರೆ.