
ದೆಹಲಿ ಜಲ ಮಂಡಳಿ ಭ್ರಷ್ಟಾಚಾರ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಸತ್ಯೇಂದರ್ ಜೈನ್ಗೆ ದೆಹಲಿ ರೂಸ್ ಅವೆನ್ಯೂ ವಿಶೇಷ ನ್ಯಾಯಾಲಯವು ಇಂದು ಜಾಮೀನು ಮಂಜೂರು ಮಾಡಿದೆ.
ವಿಶೇಷ ನ್ಯಾಯಾಧೀಶ ದಿಗ್ವಿಜಯ್ ಸಿಂಗ್ ಅವರು 2 ಲಕ್ಷ ರೂ.ಗಳ ಬಾಂಡ್ ಮತ್ತು ಅಷ್ಟೇ ಮೊತ್ತದ ಇಬ್ಬರ ಶ್ಯೂರಿಟಿ ಆಧಾರದ ಮೇಲೆ ಸತ್ಯೇಂದರ್ ಜೈನ್ಗೆ ಜಾಮೀನು ನೀಡುವಂತೆ ಆದೇಶಿಸಿದ್ದಾರೆ.
ಜಾಮೀನು ಪಡೆದ ಸತ್ಯೇಂದರ್ ಜೈನ್ ತಮ್ಮ ಪಾಸ್ಪೋರ್ಟ್ ಅನ್ನು ನ್ಯಾಯಾಲಯಕ್ಕೆ ಒಪ್ಪಿಸಬೇಕು ಮತ್ತು ನ್ಯಾಯಾಲಯದ ಅನುಮತಿಯಿಲ್ಲದೆ ದೇಶ ತೊರೆಯುವಂತಿಲ್ಲ ಎಂಬ ಷರತ್ತುಗಳನ್ನು ವಿಧಿಸಲಾಗಿದೆ.