
ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ. ಶಿವಕುಮಾರ್ ವೀಡಿಯೋ ಕರೆ ಮಾಡಿ ಧೈರ್ಯ ತುಂಬಿದ್ದಾರೆ.
ನೇಪಾಳ ಪ್ರವಾಸದಲ್ಲಿದ್ದ ಕನ್ನಡಿಗರ ಸಂಪರ್ಕ ಕಡಿತಗೊಂಡಿದ್ದು, ಮಲ್ಲಿನಾಥ್ ಎಂಬುವವರೊಂದಿಗೆ ಮಾತನಾಡಿದ ಸಿಎಂ, ಸರ್ಕಾರ ನಿಮ್ಮ ಜೊತೆಗಿದೆ ಎಂದು ಭರವಸೆ ನೀಡಿದ್ದಾರೆ.
ಪ್ರವಾಹದಲ್ಲಿ ಸಿಲುಕಿರುವ ಕನ್ನಡಿಗರ ಹುಡುಕಾಟ ಪ್ರಕ್ರಿಯೆ ನಡೆಯುತ್ತಿದ್ದು, ಸುರಕ್ಷಿತ ಸ್ಥಳದಲ್ಲಿರುವವರು ಹೊರಬರಲು ಪ್ರಯತ್ನಿಸದಂತೆ ಸಿಎಂ ಸೂಚನೆ ನೀಡಿದ್ದಾರೆ.