
ಕರ್ನಾಟಕದಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 8 ರೂಪಾಯಿಗಳಷ್ಟು ಹೆಚ್ಚಳ ಮಾಡಬೇಕು ಎಂದು 16 ಹಾಲು ಉತ್ಪಾದಕರ ಒಕ್ಕೂಟಗಳು ರಾಜ್ಯ ಸರ್ಕಾರವನ್ನು ಒತ್ತಾಯಿಸಿವೆ.
ಬರಗಾಲದಿಂದ ಜಾನುವಾರುಗಳಿಗೆ ಹಸಿರು ಮೇವಿನ ಕೊರತೆ ಉಂಟಾಗಿದ್ದು, ಪಶು ಆಹಾರದ ಕಚ್ಚಾ ವಸ್ತುಗಳ ಬೆಲೆ ಶೇಕಡಾ 25ರಷ್ಟು ಹೆಚ್ಚಾಗಿದೆ.
ಮೂರು ದಿನಗಳ ಒಳಗೆ ದರ ಹೆಚ್ಚಳದ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳದಿದ್ದರೆ ವಿಧಾನಸೌಧದತ್ತ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.