
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 59ನೇ ಸಿಸಿಹೆಚ್ ಕೋರ್ಟ್ನಲ್ಲಿ ಸೋಮವಾರ ವಿಚಾರಣೆ ನಡೆದಿದ್ದು, ದರ್ಶನ್ ಸೇರಿದಂತೆ ಆರು ಮಂದಿ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದಾರೆ.
ಪ್ರಕರಣದ ಎ14 ಆರೋಪಿ ಪ್ರದೂಶ್ ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿದ್ದು, ದರ್ಶನ್ ಪರ ವಕೀಲರು ಇದಕ್ಕೆ ಆಕ್ಷೇಪಣೆ ಸಲ್ಲಿಸಿರುವುದರಿಂದ ಕೋರ್ಟ್ ಇಂದು ನಿರ್ಧಾರ ಕೈಗೊಳ್ಳಲಿದೆ.
ಪ್ರದೂಶ್ ತನ್ನ ಅರ್ಜಿಯಲ್ಲಿ ದರ್ಶನ್ನಿಂದ ಒತ್ತಡ, ಕೊಲೆ ತಡೆಯುವ ಪ್ರಯತ್ನ ಮತ್ತು ದೇಹ ಸಾಗಿಸಿದ ರೀತಿ ಸೇರಿದಂತೆ ಹಲವು ಗಂಭೀರ ಅಂಶಗಳನ್ನು ಉಲ್ಲೇಖಿಸಿದ್ದಾರೆ ಎಂದು ವರದಿಯಾಗಿದೆ.