
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಧರ್ಮಸ್ಥಳದ ನೇತ್ರಾವತಿ ನದಿಯು ಅಪಾಯದ ಮಟ್ಟವನ್ನು ಮೀರಿ ಉಕ್ಕಿ ಹರಿಯುತ್ತಿದ್ದು, ಪರಿಸ್ಥಿತಿ ಗಂಭೀರವಾಗಿದೆ.
ನದಿಯ ನೀರಿನ ಮಟ್ಟ ಏರಿಕೆಯಾದ ಪರಿಣಾಮ ಧರ್ಮಸ್ಥಳದ ಸ್ನಾನಘಟ್ಟ ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ಮೆಟ್ಟಿಲುಗಳು ಸಹ ನೀರಿನ ಅಡಿಯಲ್ಲಿ ಮುಳುಗಿ ಕಾಣದಂತಾಗಿವೆ.
ಪ್ರವಾಹದಿಂದಾಗಿ ಉಜಿರೆ ಮತ್ತು ಬೆಳ್ತಂಗಡಿ ನಡುವಿನ ಪ್ರಮುಖ ರಸ್ತೆ ಹಾಗೂ ಮಣ್ಣಸಂಕ ಬಳಿಯ ರಸ್ತೆ ಜಲಾವೃತಗೊಂಡು ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ.