
ಕರ್ನಾಟಕ ಗಣಿಗಾರಿಕೆ ಪರಿಸರ ಪುನಶ್ಚೇತನ ನಿಗಮವು ಬಳ್ಳಾರಿ ಜಿಲ್ಲೆಯ ಶಿಕ್ಷಣ, ಅರಣ್ಯ ಮತ್ತು ಆರೋಗ್ಯ ವಲಯದ ಅಭಿವೃದ್ಧಿಗಾಗಿ 52.36 ಕೋಟಿ ರೂಪಾಯಿ ವೆಚ್ಚದ 7 ಯೋಜನೆಗಳಿಗೆ ಅನುಮೋದನೆ ನೀಡಿದೆ.
ಬಳ್ಳಾರಿ, ಸಂಡೂರು, ಕಂಪ್ಲಿ ಮತ್ತು ಸಿರುಗುಪ್ಪ ತಾಲೂಕುಗಳಲ್ಲಿ ಒಟ್ಟು 85 ಹೊಸ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ 30.35 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ.
ಸಭೆಯಲ್ಲಿ 200 ಹಾಸಿಗೆಗಳ ಕ್ಯಾನ್ಸರ್ ಆಸ್ಪತ್ರೆ, 250 ಹಾಸಿಗೆಗಳ ಸಂಡೂರು ತಾಲ್ಲೂಕು ಆಸ್ಪತ್ರೆ ಮತ್ತು ಅಡ್ವಾನ್ಸ್ಡ್ ಸ್ಕಿಲ್ ಲ್ಯಾಬ್ ಸ್ಥಾಪನೆಗೆ ಡಿಪಿಆರ್ ಪ್ರಕ್ರಿಯೆಯನ್ನು ವೇಗಗೊಳಿಸಲು ಸೂಚಿಸಲಾಗಿದೆ.