
ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಖಾತೆ ಹಂಚಿಕೆ ವಿಚಾರದಲ್ಲಿ ಉಂಟಾಗಿರುವ ಅಸಮಾಧಾನ ಬಗೆಹರಿಸಲು ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳುತ್ತಿದ್ದಾರೆ.
ಆಗಸ್ಟ್ 7 ಅಥವಾ 8ರಂದು ದೆಹಲಿಗೆ ಭೇಟಿ ನೀಡಲಿರುವ ಅವರು, ಹೈಕಮಾಂಡ್ ನಾಯಕರೊಂದಿಗೆ ಸಚಿವರ ಖಾತೆಗಳ ಬಗ್ಗೆ ಚರ್ಚಿಸಲಿದ್ದಾರೆ.
ಮಂತ್ರಿ ಸ್ಥಾನ ಕೈತಪ್ಪಿದ ಶಾಸಕರ ಮನವೊಲಿಕೆ ಕಸರತ್ತು ನಡೆಯುತ್ತಿರುವ ನಡುವೆಯೇ, ನೂತನ ಸಚಿವರು ತಮಗೆ ಬೇಕಾದ ಖಾತೆಗಾಗಿ ಪಟ್ಟು ಹಿಡಿದಿದ್ದಾರೆ.