
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಸಿದ್ಧಾರ್ಥ ವಿಹಾರ ಟ್ರಸ್ಟ್ಗೆ ಭೂಮಿ ಹಂಚಿಕೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಡೆಸುತ್ತಿದ್ದ ವಿಚಾರಣೆಯನ್ನು ಹೈಕೋರ್ಟ್ ರದ್ದುಪಡಿಸಿದೆ.
ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠವು, ದೂರುದಾರ ವಿಜಯರಾಘವ ಮರಾಠೆ ಅವರು ಸಲ್ಲಿಸಿದ್ದ ಪ್ರಮಾಣಪತ್ರದಲ್ಲಿನ ದೋಷಗಳನ್ನು ಸರಿಪಡಿಸಲು ಅವಕಾಶ ನೀಡಿ, ನಂತರ ಕಾನೂನುಬದ್ಧವಾಗಿ ತನಿಖೆ ಮುಂದುವರಿಸಲು ವಿಶೇಷ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ.
ಭ್ರಷ್ಟಾಚಾರದ ಆರೋಪಗಳ ತನಿಖೆಗೆ ಸಾಕ್ಷ್ಯ ಸಂಗ್ರಹ ಅಗತ್ಯ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್, ಈ ಹಿಂದೆ ಲೋಕಾಯುಕ್ತ ಪೊಲೀಸರು ಕ್ರಮ ಕೈಗೊಳ್ಳದಿದ್ದನ್ನು ಗಮನಿಸಿ ಪ್ರಕರಣದ ನ್ಯಾಯಿಕ ಪ್ರಕ್ರಿಯೆಯನ್ನು ಸರಿಯಾದ ಕ್ರಮದಲ್ಲಿ ನಡೆಸಲು ಸೂಚಿಸಿದೆ.