
ಸೆಪ್ಟೆಂಬರ್ 6ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿರುವ 'ಟೊಮ್ಯಾಟೋ ಫೆಸ್ಟಿವಲ್'ಗೆ ಬಿಜೆಪಿ ಸೇರಿದಂತೆ ವಿವಿಧ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ.
ಆಹಾರ ಪದಾರ್ಥಗಳನ್ನು ವ್ಯರ್ಥ ಮಾಡುವ ಮತ್ತು ಕಾಲಿನಲ್ಲಿ ತುಳಿಯುವ ಇಂತಹ ಪಾಶ್ಚಿಮಾತ್ಯ ಸಂಪ್ರದಾಯ ನಮ್ಮ ಸಂಸ್ಕೃತಿಗೆ ವಿರುದ್ಧವಾಗಿದೆ ಎಂದು ಸಂಘಟನೆಗಳು ಆರೋಪಿಸಿವೆ.
ಈ ಕಾರ್ಯಕ್ರಮಕ್ಕೆ ಸರ್ಕಾರ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂದು ಬಿಜೆಪಿ ರಾಜ್ಯ ವಕ್ತಾರ ಪ್ರಕಾಶ್ ಸೇರಿದಂತೆ ಹಲವು ಮುಖಂಡರು ಆಗ್ರಹಿಸಿದ್ದಾರೆ.