
ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆ ವಿರೋಧಿಸಿ ಜೆಡಿಎಸ್ ಹಮ್ಮಿಕೊಂಡಿರುವ ಮೂರು ದಿನಗಳ ಪಾದಯಾತ್ರೆಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭಾನುವಾರ ಮಧ್ಯಾಹ್ನ ಬೈರಮಂಗಲದಲ್ಲಿ ಚಾಲನೆ ನೀಡಿದರು.
ಮಧ್ಯಾಹ್ನ 1.30ಕ್ಕೆ ಆರಂಭವಾದ ಈ ಪಾದಯಾತ್ರೆಯಲ್ಲಿ ಆರ್. ಅಶೋಕ, ನಿಖಿಲ್ ಕುಮಾರಸ್ವಾಮಿ ಮತ್ತು ಎ. ಮಂಜುನಾಥ್ ಸೇರಿದಂತೆ ಪಕ್ಷದ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು.
ಪಾದಯಾತ್ರೆಯ ಹಿನ್ನೆಲೆಯಲ್ಲಿ ಬಿಡದಿ-ಹಾರೋಹಳ್ಳಿ ರಸ್ತೆಯಲ್ಲಿ ಸಂಚಾರವನ್ನು ಬದಲಾವಣೆ ಮಾಡಲಾಗಿದ್ದು, ಬೆಳಿಗ್ಗೆಯಿಂದಲೇ ಈ ಮಾರ್ಗದಲ್ಲಿ ಸಂಚಾರ ಬಂದ್ ಆಗಿತ್ತು.