
ನೈಋತ್ಯ ಮಧ್ಯಪ್ರದೇಶದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ತುಮಕೂರು, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಬೀಸುವ ನಿರೀಕ್ಷೆಯಿದ್ದು ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಮಧ್ಯಪ್ರದೇಶದ ವಾಯುಭಾರ ಕುಸಿತದಿಂದ ಹೊರಹೊಮ್ಮಿದ ಮುಂಗಾರು ಟ್ರಫ್ ಮಹಾರಾಷ್ಟ್ರದಿಂದ ಮನ್ನಾರ್ ಕೊಲ್ಲಿಯವರೆಗೆ ವಿಸ್ತರಿಸಿರುವುದರಿಂದ ಈ ಹವಾಮಾನ ಬದಲಾವಣೆ ಉಂಟಾಗಿದೆ.