
ಓಣಂ ಹಬ್ಬದ ಪ್ರಯುಕ್ತ ಕೇರಳಕ್ಕೆ ತೆರಳುವ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು ನೈಋತ್ಯ ರೈಲ್ವೆಯು ಬೆಂಗಳೂರಿನಿಂದ ತಿರುವನಂತಪುರಂ ನಾರ್ತ್ಗೆ ವಿಶೇಷ ಎಕ್ಸ್ಪ್ರೆಸ್ ರೈಲನ್ನು ಓಡಿಸಲಿದೆ.
ರೈಲು ಸಂಖ್ಯೆ 06575 ಆಗಸ್ಟ್ 22ರ ಶನಿವಾರ ಸಂಜೆ 4.40ಕ್ಕೆ SMVT ಬೆಂಗಳೂರಿನಿಂದ ಹೊರಟು ಭಾನುವಾರ ಬೆಳಗ್ಗೆ 10 ಗಂಟೆಗೆ ತಲುಪಲಿದ್ದು, ರೈಲು ಸಂಖ್ಯೆ 06576 ಆಗಸ್ಟ್ 23ರ ಭಾನುವಾರ ಮಧ್ಯಾಹ್ನ 12.40ಕ್ಕೆ ತಿರುವನಂತಪುರಂನಿಂದ ಹೊರಟು ಸೋಮವಾರ ಬೆಳಗ್ಗೆ 5.15ಕ್ಕೆ ಬೆಂಗಳೂರು ಕ್ಯಾಂಟ್ ತಲುಪಲಿದೆ.
ಒಟ್ಟು 20 ಬೋಗಿಗಳನ್ನು ಒಳಗೊಂಡಿರುವ ಈ ವಿಶೇಷ ರೈಲು ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್, ಪಾಲಕ್ಕಾಡ್ ಮತ್ತು ಕೊಲ್ಲಂ ಸೇರಿದಂತೆ ಎರಡೂ ದಿಕ್ಕುಗಳಲ್ಲಿ ಹಲವು ಪ್ರಮುಖ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.