
ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2000 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಬಿದ್ದಿದ್ದು, ಕಳೆದ 20-25 ವರ್ಷಗಳಿಂದ ಕೆಲಸ ಮಾಡುತ್ತಿರುವ 4000 ಅತಿಥಿ ಉಪನ್ಯಾಸಕರಿಗೆ ಕೆಲಸ ಕಳೆದುಕೊಳ್ಳುವ ಆತಂಕ ಎದುರಾಗಿದೆ.
ಪ್ರಸ್ತುತ ಗರಿಷ್ಠ 39 ಸಾವಿರ ರೂ. ಗೌರವಧನ ಪಡೆಯುತ್ತಿರುವ ಅತಿಥಿ ಉಪನ್ಯಾಸಕರು, ನೇಮಕಾತಿಯಲ್ಲಿ ತಮಗೆ ಆದ್ಯತೆ ನೀಡಬೇಕೆಂದು ಆಗ್ರಹಿಸಿ ಸುಪ್ರೀಂ ಕೋರ್ಟ್ ತೀರ್ಪಿನ ಆಧಾರದ ಮೇಲೆ ಕಾನೂನು ಹೋರಾಟಕ್ಕೆ ಸಿದ್ಧರಾಗಿದ್ದಾರೆ.
ಸುಮಾರು 2000 ಹುದ್ದೆಗಳು ಭರ್ತಿಯಾದರೆ ಅರ್ಧದಷ್ಟು ಅತಿಥಿ ಉಪನ್ಯಾಸಕರು ಬೀದಿಗೆ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಸರ್ಕಾರ ಪರಿಹಾರ ಕಲ್ಪಿಸಬೇಕೆಂದು ಒತ್ತಾಯಿಸಿದ್ದಾರೆ.