
ಭಾಲ್ಕಿಯ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ ಆಗಸ್ಟ್ 13ರ ಬೆಳಿಗ್ಗೆ 10 ಗಂಟೆಗೆ 2026ನೇ ಸಾಲಿನ ನೀಟ್ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ನಡೆಯಲಿದೆ.
ಬೆಂಗಳೂರು ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಸಚಿವ ಡಾ.ರಿಯಾಜ್ ಭಾಷ್ ಎಸ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ರಾಷ್ಟ್ರೀಯ ಶೈಕ್ಷಣಿಕ ಪ್ರಶಸ್ತಿ ಪುರಸ್ಕೃತೆ ಡಾ.ಉಮಾ ಬಸವರಾಜ ದೇಶಮುಖ ಅವರನ್ನು ಇದೇ ಸಮಾರಂಭದಲ್ಲಿ ಸನ್ಮಾನಿಸಲಾಗುವುದು ಎಂದು ಆಡಳಿತಾಧಿಕಾರಿ ಮೋಹನ ರೆಡ್ಡಿ ತಿಳಿಸಿದ್ದಾರೆ.