
ಉತ್ತರ ಪ್ರದೇಶದಲ್ಲಿ ತಜ್ಞ ವೈದ್ಯರ ಕೊರತೆ ನೀಗಿಸಲು ಸರ್ಕಾರಿ ವೈದ್ಯರ ನಿವೃತ್ತಿ ವಯಸ್ಸನ್ನು 65ರಿಂದ 70 ವರ್ಷಕ್ಕೆ ಏರಿಸಲು ಯೋಗಿ ಆದಿತ್ಯನಾಥ್ ಸರ್ಕಾರ ನಿರ್ಧರಿಸಿದೆ.
ಕಾರ್ಡಿಯಾಲಜಿ, ಪೀಡಿಯಾಟ್ರಿಕ್ಸ್ ಮತ್ತು ಗೈನೆಕಾಲಜಿಯಂತಹ ವಿಭಾಗಗಳಲ್ಲಿ ಹಿರಿಯ ವೈದ್ಯರ ಅನುಭವವನ್ನು ಬಳಸಿಕೊಳ್ಳಲು ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಆರೋಗ್ಯ ಇಲಾಖೆಗೆ ಸೂಚನೆ ನೀಡಿದ್ದಾರೆ.
ಕರ್ನಾಟಕದಲ್ಲೂ ಸೂಪರ್ ಸ್ಪೆಷಾಲಿಟಿ ವೈದ್ಯರ ಕೊರತೆ ನೀಗಿಸಲು ಡಾ. ಸಿ.ಎನ್. ಮಂಜುನಾಥ್ ಸಮಿತಿಯ ಶಿಫಾರಸಿನಂತೆ ನಿವೃತ್ತಿ ವಯಸ್ಸನ್ನು 65ಕ್ಕೆ ಹೆಚ್ಚಿಸಲಾಗಿದೆ.