
ತಮಿಳುನಾಡಿಗೆ ಪ್ರತಿದಿನ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸಿಡಬ್ಲ್ಯೂಎಂಎ ನೀಡಿದ ಆದೇಶವನ್ನು 6 ಸಾವಿರ ಕ್ಯೂಸೆಕ್ಗೆ ಇಳಿಸುವಂತೆ ಕರ್ನಾಟಕ ಸರ್ಕಾರ ಮನವಿ ಸಲ್ಲಿಸಿದೆ.
ರಾಜ್ಯದ ಜಲಾಶಯಗಳಲ್ಲಿ ನೀರಿನ ಒಳಹರಿವು ಶೇ.47.68ರಷ್ಟು ಕುಸಿತ ಕಂಡಿದ್ದು, ಆ.18ರ ಹೊತ್ತಿಗೆ ಕೇವಲ 77.907 ಟಿಎಂಸಿ ನೀರು ಮಾತ್ರ ಸಂಗ್ರಹವಿದೆ.
ಹೆಚ್ಚುವರಿ ನೀರು ಬಿಡುಗಡೆ ಮಾಡಿದರೆ 1.959 ಲಕ್ಷ ಎಕರೆ ನೀರಾವರಿ ಪ್ರದೇಶಕ್ಕೆ ಹೊಡೆತ ಬೀಳುವ ಮತ್ತು ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಆತಂಕವಿದೆ.