
ಚಾಮರಾಜನಗರದ ಹನೂರು ಬಳಿ ಜಿಲೆಟಿನ್ ಕಡ್ಡಿ ಸ್ಫೋಟಿಸಿ ಅರಣ್ಯ ಇಲಾಖೆ ಸಿಬ್ಬಂದಿ ಮೃತಪಟ್ಟ ಪ್ರಕರಣದ ತನಿಖೆಯನ್ನು ನಕ್ಸಲ್ ನಿಗ್ರಹ ಪಡೆಗೆ (ANF) ವಹಿಸಲು ಸರ್ಕಾರ ಚಿಂತನೆ ನಡೆಸಿದೆ.
ಈ ಪ್ರಕರಣದಲ್ಲಿ ನಕ್ಸಲ್ ಪರ ಒಲವುಳ್ಳ 'ಟೈಗರ್ ಆಫ್ ಜಸ್ಟೀಸ್' ಸಂಘಟನೆಯ ಪಾತ್ರ ಬೆಳಕಿಗೆ ಬಂದಿರುವುದರಿಂದ ಎಎನ್ಎಫ್ ಅನ್ನು ಮತ್ತೆ ಸಕ್ರಿಯಗೊಳಿಸಲು ಗೃಹ ಇಲಾಖೆ ನಿರ್ಧರಿಸಿದೆ.
ಪ್ರಸ್ತುತ ಸಿಐಡಿ ತಂಡವು ನಾಲ್ಕು ಪ್ರತ್ಯೇಕ ತಂಡಗಳ ಮೂಲಕ ತನಿಖೆ ನಡೆಸುತ್ತಿದ್ದು, ಪ್ರಕರಣದ ಗಂಭೀರತೆ ಪರಿಗಣಿಸಿ ಎನ್ಐಎ (NIA) ಕೂಡ ಎಂಟ್ರಿಯಾಗುವ ಸಾಧ್ಯತೆ ಇದೆ.