
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೂತನವಾಗಿ ಸೇರ್ಪಡೆಯಾದ 19 ಸಚಿವರಿಗೆ ಆಗಸ್ಟ್ 5ರಿಂದ ತಮ್ಮ ಉಸ್ತುವಾರಿ ಜಿಲ್ಲೆಗಳಿಗೆ ತೆರಳಿ ಮಳೆ ಮತ್ತು ಬರ ಪರಿಸ್ಥಿತಿ ಪರಿಶೀಲಿಸಲು ಸೂಚಿಸಿದ್ದಾರೆ.
ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಶಾಸಕರಿಗೆ ತಾಳ್ಮೆಯಿಂದಿರುವಂತೆ ಸಲಹೆ ನೀಡಿದ ಸಿಎಂ, ಶಾಸಕಾಂಗದಲ್ಲಿ ಶೇ. 15ರಷ್ಟು ಮಾತ್ರ ಸಚಿವರಾಗಲು ಅವಕಾಶವಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಸಂಪುಟ ವಿಸ್ತರಣೆಯಿಂದ ಸಿದ್ದರಾಮಯ್ಯ ಅವರಿಗೆ ಅಸಮಾಧಾನವಿದೆ ಎಂಬ ವರದಿಗಳನ್ನು ತಳ್ಳಿಹಾಕಿದ ಸಿಎಂ, ಹೈಕಮಾಂಡ್ ಮಾರ್ಗದರ್ಶನದಂತೆ ಒಗ್ಗಟ್ಟಿನಿಂದ ಸರ್ಕಾರ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.