
ಕೋಲಾರ ತಾಲೂಕಿನ ತೊಟ್ಲಿ ಗ್ರಾಮದಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೋತಿಯೊಂದಕ್ಕೆ ಗ್ರಾಮಸ್ಥರು ಆಂಜನೇಯನ ಪ್ರತಿರೂಪವೆಂದು ನಂಬಿ ಸಕಲ ಶಾಸ್ತ್ರೋಕ್ತವಾಗಿ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ.
ಮೃತಪಟ್ಟ 11ನೇ ದಿನದಂದು ಕೋತಿಯ ಸಮಾಧಿ ಸ್ಥಳದಲ್ಲಿ ವೈಕುಂಠ ಸಮಾರಾಧನೆ ಕಾರ್ಯಕ್ರಮವನ್ನು ಹಮ್ಮಿಕೊಂಡು, ವಿಶೇಷ ಪೂಜೆ ಮತ್ತು ಧಾರ್ಮಿಕ ವಿಧಿವಿಧಾನಗಳನ್ನು ನಡೆಸಲಾಗಿದೆ.
ಈ ಕಾರ್ಯಕ್ರಮದ ಅಂಗವಾಗಿ ಗ್ರಾಮಸ್ಥರು ನೂರಾರು ಜನರಿಗೆ ಮಹಾ ಪ್ರಸಾದ ವಿನಿಯೋಗ ಮತ್ತು ಅನ್ನಸಂತರ್ಪಣೆಯನ್ನು ಏರ್ಪಡಿಸುವ ಮೂಲಕ ಪ್ರಾಣಿಯ ಮೇಲಿನ ಭಕ್ತಿಯನ್ನು ಪ್ರದರ್ಶಿಸಿದ್ದಾರೆ.