
ಭಾರತೀಯ ಹವಾಮಾನ ಇಲಾಖೆಯು ಸೆಪ್ಟೆಂಬರ್ 3ರವರೆಗೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಆರ್ಭಟ ಜೋರಾಗಿದೆ.
ಆಗಸ್ಟ್ 29ರ ಸುಮಾರಿಗೆ ವಾಯುವ್ಯ ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ರೂಪುಗೊಳ್ಳುವ ಸಾಧ್ಯತೆಯಿದ್ದು, ಇದು ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ಮತ್ತು ಕೇರಳದಲ್ಲಿ ಮಳೆಗೆ ಕಾರಣವಾಗಲಿದೆ.
ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.