
ಶಾಸಕ ಬಿ.ಪಿ. ಹರೀಶ್ ಅವರನ್ನು ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅಸಂಸದೀಯ ಪದ ಬಳಸಿ ನಿಂದಿಸಿದ್ದಾರೆ ಎಂದು ಆರೋಪಿಸಿ ಶನಿವಾರ ಹರಿಹರದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯ ವೇಳೆ ಪೊಲೀಸರ ಕಣ್ತಪ್ಪಿಸಿ ಸಚಿವರ ಪ್ರತಿಕೃತಿಗೆ ಬೆಂಕಿ ಹಚ್ಚಲಾಗಿದ್ದು, ಬೆಂಕಿ ನಂದಿಸುವಾಗ ನಡೆದ ವಾಗ್ವಾದದಲ್ಲಿ ಕೆಲ ಪೊಲೀಸರಿಗೆ ಸುಟ್ಟ ಗಾಯಗಳಾಗಿವೆ.
ಸಚಿವರು ಕ್ಷಮೆ ಕೋರದಿದ್ದರೆ ಮುಂದಿನ ದಿನಗಳಲ್ಲಿ ಮನೆಗೆ ಮುತ್ತಿಗೆ ಹಾಕಲಾಗುವುದು ಮತ್ತು ಅವರನ್ನು ಸಂಪುಟದಿಂದ ವಜಾಗೊಳಿಸುವವರೆಗೂ ಹೋರಾಟ ನಿಲ್ಲದು ಎಂದು ಬಿಜೆಪಿ ಮುಖಂಡರು ಎಚ್ಚರಿಸಿದ್ದಾರೆ.