ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬದ 32 ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಲು ತಮಿಳುನಾಡು ಸರ್ಕಾರ ಹೊರಡಿಸಿದ್ದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ.
ನಿಯಮಾವಳಿಗಳನ್ನು ಪಾಲಿಸದೆ ನೇಮಕಾತಿ ಮಾಡಿಕೊಳ್ಳಲಾಗಿದೆ ಎಂಬ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್, ಸರ್ಕಾರದ ಆದೇಶವನ್ನು ರದ್ದುಪಡಿಸಿ ಸಿಎಂ ವಿಜಯ್ಗೆ ಹಿನ್ನಡೆ ಉಂಟುಮಾಡಿದೆ.
ಕಳೆದ ವರ್ಷ ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷದ ರ್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮಕ್ಕಳು ಸೇರಿದಂತೆ ಒಟ್ಟು 41 ಜನರು ಮೃತಪಟ್ಟಿದ್ದರು.