ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಹಳೆ ಮೈಸೂರು ಭಾಗದ ವೀರಶೈವ ಲಿಂಗಾಯತ ಸಮುದಾಯದ ಶಾಸಕರಿಗೆ ಸೂಕ್ತ ಪ್ರಾತಿನಿಧ್ಯ ನೀಡಬೇಕೆಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಒತ್ತಾಯಿಸಿದೆ.
ತಿಪಟೂರು ಶಾಸಕ ಷಡಕ್ಷರಿ ಮತ್ತು ಗುಂಡ್ಲುಪೇಟೆ ಶಾಸಕ ಗಣೇಶ್ ಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಮಹಾಸಭಾದ ತಾಲೂಕು ಅಧ್ಯಕ್ಷ ಶೇಖರ್ ಸಂಕೋಡನಹಳ್ಳಿ ಮನವಿ ಮಾಡಿದ್ದಾರೆ.
ಸಚಿವ ಸಂಪುಟ ವಿಸ್ತರಣೆಗಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜಾತಿ ಮತ್ತು ಪ್ರಾಂತ್ಯವಾರು ಪ್ರಾತಿನಿಧ್ಯದ ಕುರಿತು ಹೈಕಮಾಂಡ್ ಜೊತೆ ಗಂಭೀರ ಮಾತುಕತೆ ನಡೆಸುತ್ತಿದ್ದಾರೆ.