
ಬ್ಯಾಟರ್ ಬಿ. ಸಾಯಿ ಸುದರ್ಶನ್ ಅವರು ಕಾಲಿನ ಹೆಬ್ಬೆರಳಿನ ಗಾಯದಿಂದಾಗಿ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ.
ಸುದರ್ಶನ್ ಅವರ ಸ್ಥಾನವನ್ನು ಕರ್ನಾಟಕದ ದೇವದತ್ತ ಪಡಿಕ್ಕಲ್ ತುಂಬಲಿದ್ದು, ಅವರು ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವುದು ಬಹುತೇಕ ಖಚಿತವಾಗಿದೆ.
ಸುದರ್ಶನ್ ಅವರು ಬೆಂಗಳೂರಿನ ಬಿಸಿಸಿಐ ಶ್ರೇಷ್ಠತಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಂಪೂರ್ಣ ಚೇತರಿಕೆಗೆ ಇನ್ನೂ ಸಮಯ ಬೇಕಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.