
ಚಿಕ್ಕೋಡಿಯ ಯಕ್ಸಂಬಾ ಗ್ರಾಮದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವಿಸಿ ಗಲಾಟೆ ಮಾಡಿದ ಅನಿಲ ನಿಂಗಪ್ಪ ಪೂಜಾರಿ ಎಂಬಾತನಿಗೆ ಜೆಎಂಎಫ್ಸಿ ನ್ಯಾಯಾಲಯ 50 ಗಿಡಗಳನ್ನು ನೆಡುವಂತೆ ಆದೇಶಿಸಿದೆ.
ಆರೋಪಿಯು ಸಾರ್ವಜನಿಕ ರಸ್ತೆಯಲ್ಲಿ ಜೋರಾಗಿ ಕೂಗಾಡಿ ಅಸಭ್ಯವಾಗಿ ವರ್ತಿಸಿದ್ದರಿಂದ ಸಾರ್ವಜನಿಕ ಶಾಂತಿಗೆ ಭಂಗ ತಂದಿದ್ದನು.
ಈ ಘಟನೆಗೆ ಸಂಬಂಧಿಸಿದಂತೆ ಸದಾಲಗಾ ಪೊಲೀಸ್ ಠಾಣೆಯಲ್ಲಿ ನೂತನ ಭಾರತೀಯ ನ್ಯಾಯ ಸಂಹಿತೆ (BNS) ಅಡಿ ಪ್ರಕರಣ ದಾಖಲಾಗಿತ್ತು.