
ಕರ್ನಾಟಕದ ಸರ್ಕಾರಿ ಕಾರ್ಯಕ್ರಮಗಳಲ್ಲಿ ಇನ್ಮುಂದೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 26ರಂದು ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದ 1937ರ ನಿರ್ಣಯಕ್ಕೆ ಬದ್ಧವಾಗಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಇತ್ತೀಚಿನ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಆರು ಚರಣಗಳನ್ನು ಹಾಡಿದ್ದು ತಮ್ಮ ಅರಿವಿಲ್ಲದೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.
ರಾಷ್ಟ್ರಗೀತೆಯ ಮಾದರಿಯಲ್ಲೇ ವಂದೇ ಮಾತರಂಗೂ ಕಾನೂನು ರಕ್ಷಣೆ ನೀಡುವ ಮಸೂದೆಯ ಕುರಿತು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ರಾಜಕೀಯ ವಾಗ್ವಾದ ನಡೆಯುತ್ತಿರುವ ಬೆನ್ನಲ್ಲೇ ಈ ಘೋಷಣೆ ಹೊರಬಿದ್ದಿದೆ.