
ಟಿ.ನರಸೀಪುರದಲ್ಲಿ ನಡೆದ ಗಣೇಶ ಮೂರ್ತಿ ಶೋಭಾಯಾತ್ರೆ ವೇಳೆ ಪ್ರಚೋದನಕಾರಿ ಭಾಷಣ ಮಾಡಲಾಗಿದೆ ಎಂದು ಕಾಂಗ್ರೆಸ್ ಪಕ್ಷವು ಮೈಸೂರು ಎಸ್ಪಿಗೆ ದೂರು ನೀಡಿದೆ.
ಸೆಪ್ಟೆಂಬರ್ 18ರಂದು ನಡೆದ ಮೆರವಣಿಗೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಇನ್ಸ್ಪೆಕ್ಟರ್ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.
ನಿಗದಿತ ಸಮಯಕ್ಕಿಂತ ಹೆಚ್ಚು ಮೆರವಣಿಗೆ ನಡೆಸಿರುವ ಈ ಘಟನೆಯ ಬಗ್ಗೆ ಎಫ್ಐಆರ್ ದಾಖಲಿಸುವಂತೆ ಕಾಂಗ್ರೆಸ್ ನಿಯೋಗ ಮನವಿ ಮಾಡಿದೆ.