
ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆಗಸ್ಟ್ 25ರಿಂದ ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 9,000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಶಿಫಾರಸು ಮಾಡಿದೆ.
ಬಿಳಿಗುಂಡ್ಲು ಮಾಪನ ಕೇಂದ್ರದಲ್ಲಿ ಒಟ್ಟು 11.66 ಟಿಎಂಸಿ ನೀರು ಹರಿಯುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯದ ಜಲಾಶಯಗಳಿಂದ ನೀರು ಬಿಡುಗಡೆ ಮಾಡುವಂತೆ ಸಮಿತಿಯು ಕರ್ನಾಟಕಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಕಳೆದ 30 ವರ್ಷಗಳ ಸರಾಸರಿಗೆ ಹೋಲಿಸಿದರೆ ಒಳಹರಿವು ಶೇ. 49.18ರಷ್ಟು ಕುಸಿದಿದ್ದು, ನಿರಂತರ ನೀರು ಬಿಡುಗಡೆ ಅಸಾಧ್ಯವೆಂದು ಕರ್ನಾಟಕದ ಅಧಿಕಾರಿಗಳು 141ನೇ ಸಭೆಯಲ್ಲಿ ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.