
ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ಉಡುಪಿ, ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಉತ್ತರ ಕನ್ನಡದ ಹೊನ್ನಾವರದ ನಗರಬಸ್ತಿಕೇರಿಯಲ್ಲಿ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಅಂದರೆ 102 ಮಿ.ಮೀ. ಮಳೆಯಾಗಿದೆ.
ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಗಾಳಿ ಸಹಿತ ಮಳೆಯಾಗಲಿದ್ದು, ಉತ್ತರ ಒಳನಾಡಿನ 10 ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯಿದೆ.