
ಕರ್ನಾಟಕ ಹೈಕೋರ್ಟ್ಗೆ ಆರು ಮಂದಿ ಹೆಚ್ಚುವರಿ ನ್ಯಾಯಮೂರ್ತಿಗಳನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಕ್ರವಾರ ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ.
ರಾಘವೇಂದ್ರ ಸೀತಾರಾಮ ಶ್ರೀವತ್ಸ, ಹೇಮಾ ಕುಲಕರ್ಣಿ, ಸುಬ್ರಮಣ್ಯ ರಂಗರಾವ್, ತಡಗವಾಡಿ ಪ್ರಕಾಶ್ ವಿವೇಕಾನಂದ, ಬಕ್ಕೇಶ್ವರ ಪ್ರಮೋದ್ ಮತ್ತು ಹೊಂಬೆ ಗೌಡ ಶಾಂತಿ ಭೂಷಣ್ ಅವರು ಈ ಹುದ್ದೆಗೆ ನೇಮಕಗೊಂಡಿದ್ದಾರೆ.
ಸಂವಿಧಾನದ 224(1)ನೇ ವಿಧಿಯಡಿ ಈ ನೇಮಕ ಮಾಡಲಾಗಿದ್ದು, ಅಧಿಕಾರ ಸ್ವೀಕರಿಸಿದ ದಿನಾಂಕದಿಂದ ಮುಂದಿನ ಎರಡು ವರ್ಷಗಳ ಅವಧಿಗೆ ಇವರು ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಕಾರ್ಯ ನಿರ್ವಹಿಸಲಿದ್ದಾರೆ.