
ಜೂನ್ 1ರಿಂದ ಆಗಸ್ಟ್ 26ರವರೆಗೆ ರಾಜ್ಯದಲ್ಲಿ ವಾಡಿಕೆಗಿಂತ ಶೇ. 30ರಷ್ಟು ಮಳೆ ಕೊರತೆಯಾಗಿದ್ದು, 134 ತಾಲೂಕುಗಳನ್ನು ಬರಪೀಡಿತ ಎಂದು ಗುರುತಿಸಲಾಗಿದೆ ಎಂದು ಡಿಸಿಎಂ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.
ರಾಜ್ಯದಲ್ಲಿ 84.10 ಲಕ್ಷ ಹೆಕ್ಟೇರ್ ಬಿತ್ತನೆ ಗುರಿಯ ಪೈಕಿ ಕೇವಲ 60 ಲಕ್ಷ ಹೆಕ್ಟೇರ್ (ಶೇ. 71) ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದ್ದು, 151 ಲಕ್ಷ ಟನ್ ಮೇವಿನ ಅಭಾವದ ಭೀತಿಯಿದೆ.
ರೈತರ ಬೆಳೆ ನಷ್ಟ ಪರಿಹಾರಕ್ಕಾಗಿ ಫಸಲ್ ಬಿಮಾ ಯೋಜನೆಯಡಿ ನೋಂದಣಿ ಅವಧಿಯನ್ನು ಆಗಸ್ಟ್ 31ರವರೆಗೆ ವಿಸ್ತರಿಸಲಾಗಿದ್ದು, ಕುಡಿಯುವ ನೀರಿಗಾಗಿ ಟ್ಯಾಂಕರ್ ವ್ಯವಸ್ಥೆ ಮಾಡಲಾಗಿದೆ.