
ತೇರದಾಳದ ಗೋಲಬಾವಿಯಲ್ಲಿ ಬಸವೇಶ್ವರ ಜಾತ್ರೆ ಅಂಗವಾಗಿ ಆಗಸ್ಟ್ 28 ರಂದು ಪುರುಷರ ಮುಕ್ತ ಕಬಡ್ಡಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ.
ವಿಜೇತ ತಂಡಗಳಿಗೆ ಕ್ರಮವಾಗಿ ₹30 ಸಾವಿರ, ₹25 ಸಾವಿರ, ₹20 ಸಾವಿರ ಮತ್ತು ₹15 ಸಾವಿರ ನಗದು ಬಹುಮಾನ ಹಾಗೂ ಟ್ರೋಫಿಗಳನ್ನು ನೀಡಲಾಗುವುದು.
ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ನಡೆಯುವ ಈ ಪಂದ್ಯಾವಳಿಯನ್ನು ರಬಕವಿಯ ಬ್ರಹ್ಮಾನಂದ ಆಶ್ರಮದ ಗುರುಸಿದ್ದೇಶ್ವರ ಶ್ರೀ ಉದ್ಘಾಟಿಸಲಿದ್ದಾರೆ.