
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ದರ್ಬೆಯಲ್ಲಿ ಡಿಜಿಟಲ್ ಸೇವಾ ಕೇಂದ್ರದಲ್ಲಿ ಗ್ರಾಹಕಿ ಫಾತಿಮತ್ ಮಿಸ್ವಾನ ಮತ್ತು ಸಿಬ್ಬಂದಿ ನಡುವೆ ನಡೆದ ಜಗಳ ಕೋಮು ಬಣ್ಣ ಪಡೆದಿದ್ದು, ಸಾರ್ವಜನಿಕ ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಸ್ಪಿ ಅರುಣ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಮಾಜಿ ಬಿಜೆಪಿ ಶಾಸಕ ಸಂಜೀವ ಮಠಂದೂರು ಹೆಸರಿನ ಫೇಸ್ಬುಕ್ ಖಾತೆ ಮತ್ತು ದಿನೇಶ್ ಪಂಜಿಗ ಎಂಬವರ ವಿರುದ್ಧ ಬಂದ್ಗೆ ಕರೆ ನೀಡಿದ ಆರೋಪದಡಿ ಎಫ್ಐಆರ್ ದಾಖಲಾಗಿದೆ.
ಈಗಾಗಲೇ ಒಬ್ಬರನ್ನು ಬಂಧಿಸಲಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ತನಿಖೆ ಮುಂದುವರಿಸಲಾಗುವುದು ಮತ್ತು ಮಂಗಳವಾರ ಬಂದ್ ನಡೆಸಲು ಯತ್ನಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಅರುಣ್ ಕುಮಾರ್ ತಿಳಿಸಿದ್ದಾರೆ.