
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಜಾಜೂರು ಬಳಿ ಅಕ್ರಮವಾಗಿ ಸ್ಫೋಟಕ ಸಾಗಿಸುತ್ತಿದ್ದ ಶಿವಶಂಕರ್ ಅಲಿಯಾಸ್ ಆಟೋ ಶಂಕರ್ (38) ಎಂಬಾತನನ್ನು ದಾಬಸ್ಪೇಟೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯ ಕಾರಿನಿಂದ 600 ಜಿಲೆಟಿನ್ ಕಡ್ಡಿಗಳು ಮತ್ತು 100 ಡಿಟೋನೇಟರ್ಗಳನ್ನು ಪೊಲೀಸರು ಜಪ್ತಿ ಮಾಡಿದ್ದು, ಕಲ್ಲು ಗಣಿಗಾರಿಕೆಗಾಗಿ ಇವುಗಳನ್ನು ಸಾಗಿಸಲಾಗುತ್ತಿತ್ತು.
ದಾಬಸ್ಪೇಟೆ ಪೊಲೀಸ್ ಠಾಣೆಯಲ್ಲಿ ಸ್ಫೋಟಕ ವಸ್ತುಗಳ ಕಾಯ್ದೆ 1908 ಮತ್ತು ಬಿಎನ್ಎಸ್ ಸೆಕ್ಷನ್ 288ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.