
ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಅವರು 2027ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗಾಗಿ 15 ಸದಸ್ಯರ ಭಾರತೀಯ ತಂಡವನ್ನು ಹೆಸರಿಸಿದ್ದು, ಇದರಲ್ಲಿ 15 ವರ್ಷದ ಬಾಲಕ ವೈಭವ್ ಸೂರ್ಯವಂಶಿಗೆ ಸ್ಥಾನ ನೀಡಿದ್ದಾರೆ.
ಉತ್ತಪ್ಪ ತಮ್ಮ ತಂಡದಲ್ಲಿ ರೋಹಿತ್ ಶರ್ಮ ಮತ್ತು ಶುಭ್ಮನ್ ಗಿಲ್ ಅವರನ್ನು ಆರಂಭಿಕ ಆಟಗಾರರನ್ನಾಗಿ ಹಾಗೂ ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ಅವರನ್ನು ಮಧ್ಯಮ ಕ್ರಮಾಂಕಕ್ಕೆ ಆಯ್ಕೆ ಮಾಡಿದ್ದಾರೆ.
ವಿಕೆಟ್ ಕೀಪರ್ ಆಗಿ ಕೆ.ಎಲ್. ರಾಹುಲ್ ಮತ್ತು ಸಂಜು ಸ್ಯಾಮ್ಸನ್ ಅವರನ್ನು ಹೆಸರಿಸಲಾಗಿದ್ದು, ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್ ಮತ್ತು ರಿಷಭ್ ಪಂತ್ ಸೇರಿದಂತೆ ಪ್ರಮುಖ ಆಟಗಾರರನ್ನು 15ರ ಪಟ್ಟಿಯಿಂದ ಕೈಬಿಡಲಾಗಿದೆ.