
ವಾಯುವ್ಯ ದೆಹಲಿಯ ಸ್ವರೂಪ್ ನಗರ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕಿ ಮೇಲೆ ಮೂವರು ಅಪ್ರಾಪ್ತರು ಸೇರಿದಂತೆ ನಾಲ್ವರು ಸಾಮೂಹಿಕ ಅತ್ಯಾಚಾರವೆಸಗಿ ಚಾಕುವಿನಿಂದ ಇರಿದು ಕೊಲೆಗೈದಿರುವ ಘಟನೆ ನಡೆದಿದೆ.
ಕುಶಾಕ್ ರಸ್ತೆಯ ಜೈಪಾಲ್ ರಾಣಾ ಅವರ ಹೊಲದ ಬಳಿ ಕೊಳೆತ ಸ್ಥಿತಿಯಲ್ಲಿದ್ದ ಶವವನ್ನು ನಾಯಿಗಳು ಕಚ್ಚಿ ತಿನ್ನುತ್ತಿರುವುದನ್ನು ಸ್ಥಳೀಯರು ಗಮನಿಸಿ ಸೆಪ್ಟೆಂಬರ್ 13 ರಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು 50ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿ ಟೆಂಪೋ ಚಾಲಕ ಶಿವಂ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಬಿಎನ್ಎಸ್ ಮತ್ತು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.