
ಉಡುಪಿಯ ಕುಂದಾಪುರದಲ್ಲಿ ಶುಕ್ರವಾರ ಮುಂಜಾನೆ 3:15ರ ಸುಮಾರಿಗೆ ಉದ್ಯಮಿ ಐವನ್ ರೀಚರ್ಡ್ ಮಸ್ಕರೇನಸ್ (45) ಅವರನ್ನು ಡೆರಿಕ್ ಎಂಬಾತ ನಾಡ ಬಂದೂಕಿನಿಂದ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ.
ಹಣಕಾಸಿನ ವಿಚಾರವಾಗಿ ಇಬ್ಬರ ನಡುವೆ ಇದ್ದ 1.5 ಲಕ್ಷ ರೂ. ಬಾಕಿ ಹಣದ ವಿವಾದವೇ ಈ ಕೊಲೆಗೆ ಕಾರಣವಾಗಿದ್ದು, ಆರೋಪಿಯ ಪತ್ತೆಗಾಗಿ ಪೊಲೀಸರು ಮೂರು ವಿಶೇಷ ತಂಡಗಳನ್ನು ರಚಿಸಿದ್ದಾರೆ.
ಘಟನೆ ನಡೆದ ಸ್ಥಳದಲ್ಲಿ ಐವನ್ ಜೊತೆಗಿದ್ದ ಲಲಿತ ಎಂಬ ಮಹಿಳೆ ನೀಡಿದ ಮಾಹಿತಿಯ ಮೇರೆಗೆ ಪ್ರಕರಣ ದಾಖಲಾಗಿದ್ದು, ಮೃತ ಐವನ್ ಈ ಹಿಂದೆ ರೌಡಿಶೀಟರ್ ಪಿಟ್ಟಿ ನಾಗೇಶ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದರು.