
ಯಾದಗಿರಿ ನಗರದಲ್ಲಿ ಒಂದೂವರೆ ಗಂಟೆಗಳ ಕಾಲ ಸುರಿದ ಭಾರೀ ಮಳೆಯಿಂದಾಗಿ ಬರದಿಂದ ಬಳಲುತ್ತಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
ಮಳೆಯಿಂದಾಗಿ ಒಣಗುವ ಹಂತದಲ್ಲಿದ್ದ ಬೆಳೆಗಳಿಗೆ ಜೀವಕಳೆ ಬಂದಿದ್ದು, ನಗರದ ಗಾಂಧಿ ಸರ್ಕಲ್ ಮತ್ತು ರೈಲ್ವೆ ನಿಲ್ದಾಣದಂತಹ ಪ್ರಮುಖ ರಸ್ತೆಗಳು ಜಲಾವೃತಗೊಂಡಿವೆ.
ನಗರದಲ್ಲಿ ಮಳೆಯ ಅಬ್ಬರದಿಂದಾಗಿ ವಾಹನ ಸವಾರರು ಪರದಾಡುವಂತಾಗಿದ್ದು, ಜನಜೀವನಕ್ಕೆ ಅಲ್ಪ ಪ್ರಮಾಣದ ಅಸ್ತವ್ಯಸ್ತ ಉಂಟಾಗಿದೆ.