
ಬೆಂಗಳೂರಿನಲ್ಲಿ ಪ್ರತ್ಯೇಕ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಚಿಂತನೆ ನಡೆಸಿದೆ.
ರಾಜ್ಯದ ಶಿಕ್ಷಣ ಕ್ಷೇತ್ರಕ್ಕೆ ಈ ಬಾರಿಯ ಬಜೆಟ್ನಲ್ಲಿ 55,000 ಕೋಟಿ ರೂಪಾಯಿ ಅನುದಾನವನ್ನು ಕಾಯ್ದಿರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ.
ಬ್ಯಾಂಕ್ಗಳಿಂದ 2,500 ಕೋಟಿ ರೂಪಾಯಿ ನೆರವು ಪಡೆದು ರಾಜ್ಯಾದ್ಯಂತ 807 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.