
ಎನ್ಸಿಪಿ (ಎಸ್ಪಿ) ಮುಖ್ಯಸ್ಥ ಶರದ್ ಪವಾರ್ ಮತ್ತು ಸಂಸದೆ ಸುಪ್ರಿಯಾ ಸುಳೆ ಅವರು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಎನ್ಸಿಪಿ ಪಕ್ಷವನ್ನು ಎನ್ಡಿಎ ಮೈತ್ರಿಕೂಟಕ್ಕೆ ಸೇರಿಸಿಕೊಳ್ಳಲು ಬಿಜೆಪಿ ಸಿದ್ಧವಾಗಿದೆ ಎಂದು ಮೂಲಗಳು ತಿಳಿಸಿದ್ದು, ಈ ನಿಟ್ಟಿನಲ್ಲಿ ರಾಜ್ಯದ ನಾಯಕರಿಗೆ ಸೂಚನೆಗಳನ್ನು ನೀಡಲಾಗಿದೆ.
ಅಜಿತ್ ಪವಾರ್ ಬಣದ ಸುನಿಲ್ ತತ್ಕರೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ನಂತರ, ಎರಡೂ ಬಣಗಳ ವಿಲೀನ ಅಥವಾ ಮೈತ್ರಿ ಕುರಿತ ಚರ್ಚೆಗಳು ವೇಗ ಪಡೆದುಕೊಂಡಿವೆ.