
ವಾಲ್ಮೀಕಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನವನ್ನು ಎಸ್.ಟಿ. ಸಮುದಾಯದವರಿಗೇ ನೀಡಬೇಕೆಂದು ಕೆ.ಎನ್. ರಾಜಣ್ಣ ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಎಸ್.ಟಿ. ನಾಯಕರನ್ನು ಗುರಿಯಾಗಿಸಲಾಗುತ್ತಿದೆ ಎಂಬ ಭಾವನೆ ಜನರಲ್ಲಿ ಮೂಡಿದೆ ಎಂದು ಆತಂಕ ವ್ಯಕ್ತಪಡಿಸಿದ ರಾಜಣ್ಣ, ತಪ್ಪು ಮಾಡಿದವರಿಗೆ ಜಾತಿ ಬಣ್ಣ ಬಳಿಯುವುದು ಸರಿಯಲ್ಲ ಎಂದಿದ್ದಾರೆ.
ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಯು ರಾಜಕೀಯ ಲಾಭಕ್ಕಾಗಿ ಎಸ್.ಟಿ. ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಮಾಡುತ್ತಿರುವ ಪ್ರಯತ್ನ ಎಂದು ಅವರು ಟೀಕಿಸಿದ್ದಾರೆ.