
ಕನ್ನಡ ರಂಗಭೂಮಿಯ ಹಿರಿಯ ರಂಗ ನಿರ್ದೇಶಕ, ರಂಗ ಶಿಕ್ಷಕ ಹಾಗೂ ಚಿಂತಕರಾದ ಚಿದಂಬರರಾವ್ ಜಂಬೆ ಅವರು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹೆಗ್ಗೋಡಿನಲ್ಲಿ ತಮ್ಮ 75ನೇ ವಯಸ್ಸಿನಲ್ಲಿ ನಿಧನರಾದರು.
ಅವರು ರಾಷ್ಟ್ರೀಯ ನಾಟಕ ಶಾಲೆಯಲ್ಲಿ ಪದವಿ ಪಡೆದು ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುವುದರ ಜೊತೆಗೆ, ನೀನಾಸಂ ಹಾಗೂ ರಂಗಾಯಣದ ನಿರ್ದೇಶಕರಾಗಿ ನೂರಾರು ಕಲಾ ಪ್ರತಿಭೆಗಳನ್ನು ರೂಪಿಸಿದ್ದರು.
ಅವರ ಅಂತಿಮ ಸಂಸ್ಕಾರವು ಸೆಪ್ಟೆಂಬರ್ 13ರ ಭಾನುವಾರ ಬೆಳಿಗ್ಗೆ 11 ಗಂಟೆಗೆ ಸಾಗರ ತಾಲೂಕಿನ ಅಡ್ಡೇರಿ ಗ್ರಾಮದಲ್ಲಿ ನೆರವೇರಲಿದೆ.