
ಕರಾವಳಿಯ ಜನಪದ ಕ್ರೀಡೆಯಾದ ಸಾಂಪ್ರದಾಯಿಕ ಕಂಬಳಕ್ಕೆ ಸರ್ಕಾರದಿಂದ ವಿಶೇಷ ಅನುದಾನ ನೀಡಬೇಕೆಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಪೃಥ್ವಿರಾಜ್ ಶೆಟ್ಟಿ ಆಗ್ರಹಿಸಿದ್ದಾರೆ.
ಕರಾವಳಿಯಲ್ಲಿ 100ಕ್ಕೂ ಹೆಚ್ಚು ಸಾಂಪ್ರದಾಯಿಕ ಕಂಬಳಗಳು ಜರುಗುತ್ತಿದ್ದರೂ ಇಲ್ಲಿಯವರೆಗೆ ಸರ್ಕಾರದಿಂದ ಯಾವುದೇ ಅನುದಾನ ದೊರೆತಿಲ್ಲ ಎಂದು ಅವರು ತಿಳಿಸಿದ್ದಾರೆ.
ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಕರಾವಳಿಯ ಅಭಿವೃದ್ಧಿಯೊಂದಿಗೆ ಕಂಬಳಕ್ಕೂ ಉತ್ತೇಜನ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.