
ಟಿ20 ವಿಶ್ವಕಪ್ ಗೆದ್ದ ನಂತರ ತಂಡದಿಂದ ಮತ್ತು ನಾಯಕತ್ವದಿಂದ ಕೈಬಿಟ್ಟಿದ್ದರ ಬಗ್ಗೆ ಸೂರ್ಯಕುಮಾರ್ ಯಾದವ್ ಮೊದಲ ಬಾರಿಗೆ ಬಹಿರಂಗವಾಗಿ ಪ್ರತಿಕ್ರಿಯಿಸಿದ್ದಾರೆ.
ಆಯ್ಕೆ ಸಮಿತಿಯ ಅಧ್ಯಕ್ಷ ಅಜಿತ್ ಅಗರ್ಕರ್ ಅವರು ತಂಡದ ಭವಿಷ್ಯದ ದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿದ್ದಾಗಿ ತಿಳಿಸಿದ್ದರು ಎಂದು ಸೂರ್ಯಕುಮಾರ್ ಹೇಳಿದ್ದಾರೆ.
2025ರಲ್ಲಿ ಕಳಪೆ ಫಾರ್ಮ್ನಲ್ಲಿದ್ದ ಸೂರ್ಯಕುಮಾರ್, ಅವಕಾಶ ಸಿಕ್ಕರೆ ಮತ್ತೆ ದೇಶಕ್ಕಾಗಿ ಆಡಲು ಸಿದ್ಧನಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.