
ಬೆಂಗಳೂರಿನಲ್ಲಿ ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ದೊಮ್ಮಲೂರಿನಲ್ಲಿ ಆರ್ಮಿ ಕಾಂಪೌಂಡ್ ಗೋಡೆ ಕುಸಿದು ನಾಲ್ಕು ಹಸುಗಳು ಹಾಗೂ ಒಂದು ಕರು ಮೃತಪಟ್ಟು, ಮಾಲೀಕ ಗಾಯಗೊಂಡಿದ್ದಾರೆ.
ಕಂಠೀರವ ಸ್ಟೇಡಿಯಂ ಜಂಕ್ಷನ್ ಬಳಿ ಮರ ಬಿದ್ದು ಸಿದ್ದಲಿಂಗಯ್ಯ ಜಂಕ್ಷನ್ ಕಡೆಗೆ ಸಂಚಾರಕ್ಕೆ ಅಡಚಣೆಯಾಗಿದ್ದು, ಮಲ್ಲತ್ತಹಳ್ಳಿಯಲ್ಲಿ ಮರ ಬಿದ್ದು ಆಟೋ ಜಖಂಗೊಂಡಿದೆ.
ಕೋರಮಂಗಲ, ಬಾಗಲಗುಂಟೆ ಸೇರಿದಂತೆ ವಿವಿಧ ತಗ್ಗು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿದ್ದು, ಪ್ರಮುಖ ರಸ್ತೆಗಳಲ್ಲಿ ಮಳೆ ನೀರು ನಿಂತು ವಾಹನ ಸವಾರರು ಪರದಾಡಿದ್ದಾರೆ.